ಆಸ್ಪತ್ರೆಗೆ ದಾಖಲಾಗುವಷ್ಟು ಹೊಡೆದಾಡಿಕೊಂಡ ಜೂನಿಯರ್ ಕಾಲೇಜಿನ ಉಪನ್ಯಾಸಕರು

Sampriya

ಮಂಗಳವಾರ, 23 ಜುಲೈ 2024 (15:15 IST)
Photo Courtesy X
ಕೋಲಾರ: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಉಪನ್ಯಾಸಕರು ಆಸ್ಪತ್ರೆಗೆ ದಾಖಲಾಗುವಷ್ಟು ಹೊಡೆದಾಡಿಕೊಂಡ ಘಟನೆ ಇಂದು ನಡೆದಿದೆ. ಇಬ್ಬರು ಉಪನ್ಯಾಸಕರ ನಡುವೆ ಹೊಡೆದಾಟ ನಡೆದಿದ್ದು, ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ, ಹಾಲಿ ರಾಜ್ಯಶಾಸ್ತ್ರ ಉಪನ್ಯಾಸಕ ನಾಗಾನಂದ ಕೆಂಪರಾಜು ಮತ್ತು ಕನ್ನಡ ಉನ್ಯಾಸಕ ಜೆ.ಜಿ ನಾಗರಾಜ್ ನಡುವೆ ಶುರುವಾದ ಜಗಳ ಇಬ್ಬರು ಪೆಟ್ಟು ಆಗುವಷ್ಟು ಹೊಡೆದಾಡಿಕೊಂಡಿದ್ದಾರೆ. ಇನ್ನೂ ಘಟನೆಯಲ್ಲಿ ನಾಗರಾಜ್ ಅವರ ಮುಖಕ್ಕೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ನಾಗರಾಜ್ ಅವರು, ನನ್ನ ಮೇಲೆ ಉಪನ್ಯಾಸಕ ನಾಗಾನಂದ ಕೆಂಪರಾಜು ಹಲ್ಲೆ ನಡೆಸಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸೋತಿರುವ ನಾಗಾನಂದ, ದಿನನಿತ್ಯ ನನಗೆ ಹಿಂಸೆ ಕೊಡುತ್ತಿದ್ದರು. ಅವಹೇಳನಾಕಾರಿಯಾಗಿ ನಿಂದಿಸುತ್ತಿದ್ದರು. ಅದನ್ನು ಪ್ರಶ್ನಿಸಿದ್ದಕ್ಕೆ, ಹಲ್ಲೆ ನಡೆಸಿದ್ದಾರೆ ಎಂದರು.

ಕೋಲಾರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಇನ್ಸ್‌ಪೆಕ್ಟರ್ ಸದಾನಂದ ಅವರು ಆಸ್ಪತ್ರೆಗೆ ತೆರಳಿ, ಮಾಹಿತಿ ಪಡೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ