ಬಾಮೈದ ಮತ್ತು ಅತ್ತೆಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ

ಬುಧವಾರ, 29 ಜನವರಿ 2020 (11:10 IST)
ಮೈಸೂರು : ವ್ಯಕ್ತಿಯೊಬ್ಬ ಬಾಮೈದ ಮತ್ತು ಅತ್ತೆಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ  ನಡೆಸಿದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಯರಹಳ್ಳಿಯ ಮನೆಯಲ್ಲಿ ತಡರಾತ್ರಿ ನಡೆದಿದೆ.


ಕ್ಷುಲಕ ಕಾರಣಕ್ಕೆ ಜಗಳವಾಡಿದ ಈತ ಅತ್ತೆ ಹೇಮಾವತಿಯವರ 2 ಕೈಗಳನ್ನು ಕತ್ತರಿಸಿದ್ದಲ್ಲದೆ ಬಾಮೈದ ಮನು ಕುತ್ತಿಗೆ , ತಲೆ ಭಾಗಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.  ಬಾಮೈದ ಮನು ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಈ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದ ಮನುವಿನ  ವಿವಾಹ ಸಮಾರಂಭವು ಸ್ಥಗಿತಗೊಂಡಿದೆ ಎನ್ನಲಾಗಿದೆ.

ಗಾಯಾಳು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು,  ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ