ಮೃತರನ್ನು ಬೆಳಗಾವಿ ದೇಶಪಾಂಡೆ ಗಲ್ಲಿಯ ನಿವಾಸಿ ರವಿ ಜಠಾರ (61) ಎಂದು ಗುರುತಿಸಲಾಗಿದೆ.
ಪ್ರಯಾಗ್ರಾಜ್ನಲ್ಲಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ರಾಜ್ಯಕ್ಕೆ ವಾಪಾಸ್ಸಾಗುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಇವರಿಗೆ ಪುಣೆಯಲ್ಲಿ ಹೃದಯಾಘಾತವಾಗಿದೆ. ಪುಣೆಯಲ್ಲೆ ಸಂಬಂಧಿಕರು, ಸ್ನೇಹಿತರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಇವರು ಭಾನುವಾರ ಸ್ನೇಹಿತರ ಜತೆಗೆ ಪ್ರಯಾಗರಾಜ್ಗೆ ತೆರಳಿದ್ದರು. ಯಾತ್ರೆ ಮುಗಿಸಿ ವಾಪಾಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.