ತಡರಾತ್ರಿವರೆಗೆ ‘ಕೈ’ ನಾಯಕರ ಗುಪ್ತ ಸಭೆ

ಗುರುವಾರ, 27 ಏಪ್ರಿಲ್ 2023 (19:30 IST)
ಕಾಂಗ್ರೆಸ್ ನಾಯಕರು ಬುಧವಾರ ತಡರಾತ್ರಿಯವರೆಗೂ ದಿಢೀರ್ ರಹಸ್ಯ ಸಭೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, KPCC ಅಧ್ಯಕ್ಷ D.K.ಶಿವಕುಮಾರ್ ಹಾಗೂ ಮಾಜಿ ಡಿಸಿಎಂ G. ಪರಮೇಶ್ವರ್ ಹಲವು ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಬೆಳಗಿನ ಮೂರು ಗಂಟೆಯವರೆಗೂ ಸುದೀರ್ಘವಾದ ಚರ್ಚೆ ನಡೆಸಲಾಗಿದೆ. ಹಲವು ವಿಚಾರಗಳ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಲಿಂಗಾಯತ ವಿರೋಧಿ ಹೇಳಿಕೆಯನ್ನು ಪ್ರಮುಖ ದಾಳವಾಗಿಸಿಕೊಂಡಿದ್ದಾರೆ. ಬಿಜೆಪಿ ನಾಯಕರ ಈ ತಂತ್ರವನ್ನು ಯಾವ ರೀತಿ ಎದುರಿಸಬೇಕು ಎನ್ನುವುದರ ಬಗ್ಗೆ ಕಾಂಗ್ರೆಸ್ ನಾಯಕರು ಗುಪ್ತ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ