ಗಣೇಶೋತ್ಸವದಲ್ಲಿ ಹಾಡುತ್ತಿರುವಾಗಲೇ ಕುಸಿದು ಮೃತಪಟ್ಟ ಗಾಯಕ

ಬುಧವಾರ, 4 ಸೆಪ್ಟಂಬರ್ 2019 (19:06 IST)
ಗಣೇಶೋತ್ಸವದ ಕಾರ್ಯಕ್ರಮದ ವೇದಿಕೆಯಲ್ಲಿ ಹಾಡುತ್ತಿರುವಾಗಲೇ ಕುಸಿದು ಬಿದ್ದು ಗಾಯಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಮಂಗಳೂರಲ್ಲಿ ಈ ಘಟನೆ ನಡೆದಿದೆ. ಕೊಂಕಣಿ ಸಿಂಗರ್, ಸಂಗೀತ ಸಂಯೋಜಕ ಜೆರಿ ಡಿಸೋಜಾ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮಂಗಳೂರಿನ ಬಿಜೈನಲ್ಲಿ ರಾತ್ರಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಗಣೇಶೋತ್ಸವದ ಹಿನ್ನಲೆಯಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಜೆರಾಲ್ಡ್  ಓಸ್ವಾಲ್ ಡಿಸೋಜಾ ಹಾಡೊಂದು ಹಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗಲೇ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ