ಒಂಟಿ ಸಲಗ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

ಬುಧವಾರ, 14 ಜೂನ್ 2023 (19:00 IST)
ಒಂಟಿ ಸಲಗ ಪ್ರತ್ಯಕ್ಷವಾದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸಾವನದುರ್ಗದಲ್ಲಿ ನಡೆದಿದೆ. ಸಾವನದುರ್ಗ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಸಲಗ ಅರಣ್ಯ ಪ್ರದೇಶದಲ್ಲಿಅಡ್ಡಾದಿಡ್ಡಿ ಓಡಾಡುತ್ತಿರೋದನ್ನ ಕಂಡ ಅರಣ್ಯ ಪ್ರದೇಶದಲ್ಲಿರುವ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿದ್ದು, ಕಳೆದ ವಾರ ಇಬ್ಬರನ್ನ ಕಾಡಾನೆಯೊಂದು ಬಲಿ ಪಡೆದಿತ್ತು, ಇನ್ನು ಒಂದು ಕಾಡಾನೆಯನ್ನು ಚನ್ನಪಟ್ಟಣದಲ್ಲಿ ಸೆರೆ ಹಿಡಿಯಲಾಗಿತ್ತು. ಇದೀಗ ಮತ್ತೆ ಕಾಡಾನೆಯೊಂದು ಪ್ರತ್ಯಕ್ಷವಾಗಿದ್ದು, ಅಕ್ಕಪಕ್ಕದ ಗ್ರಾಮಸ್ಥರಲ್ಲಿ ನಡುಕ ಹುಟ್ಟಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ