ಕಾವೇರಿ ಬಗ್ಗೆ ದನಿ ಎತ್ತದ ನಟರ ವಿರುದ್ಧ ಕಿಡಿ

ಬುಧವಾರ, 20 ಸೆಪ್ಟಂಬರ್ 2023 (15:44 IST)
KRS ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗ್ತಿದ್ದು, ಮಂಡ್ಯ ಭಾಗದ ರೈತರ ಆಕ್ರೋಶದ ಕಟ್ಟೆ ಒಡೆದಿದೆ. ಕಾವೇರಿ ನೀರು ಬಿಡುಗಡೆ ವಿರುದ್ಧ ದನಿ ಎತ್ತದ ಸ್ಯಾಂಡಲ್​ವುಡ್​ ನಟರ ವಿರುದ್ಧ ಮಂಡ್ಯ ರೈತರು ಆಕ್ರೋಶ ಹೊರಹಾಕಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಅನ್ನದಾತರು ರೋಷಾವೇಷ ತೋರಿದ್ದಾರೆ. ಸ್ಯಾಂಡಲ್​ವುಡ್​​ ಪ್ರಮುಖ ನಟರ ಫೋಟೋ ಹಾಕಿ, ನಟರ ಬಾಯಿಗೆ ಪಟ್ಟಿ ಅಂಟಿಸಿ ಕಿಡಿಕಾರಿದ್ದಾರೆ. ಕಾವೇರಿ ಬಗ್ಗೆ ಧ್ವನಿ ಎತ್ತದ ಕನ್ನಡ ಚಲನಚಿತ್ರ ನಟರಿಗೆ ಧಿಕ್ಕಾರ-ಧಿಕ್ಕಾರ ಎಂದು ಪೋಸ್ಟ್ ಮಾಡಿದ್ದಾರೆ. ಫೇಸ್​​ಬುಕ್​, ವಾಟ್ಸ್​ಆಪ್ ಸೇರಿದಂತೆ ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಕಾವೇರಿ ಬಗ್ಗೆ ಧ್ವನಿ ಎತ್ತದ ನಟರ ವಿರುದ್ಧ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಕನ್ನಡ ನಾಡಿನ ರೈತರಿಗೆ ಅನ್ಯಾಯ ಆದಾಗ ಡಾ.ರಾಜ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಧಾವಿಸಿ ಬರ್ತಿದ್ರು ಎಂದು ಅವರನ್ನು ಸ್ಮರಿಸಿಕೊಂಡಿದ್ದಾರೆ. ಇಂದು ಯಾವ ನಟರೂ ಕಾವೇರಿ ಬಗ್ಗೆ ಧ್ವನಿ ಎತ್ತದೇ ಇರೋದು ಬಹಳ ನೋವಿನ ಸಂಗತಿ. ನಮ್ಮಿಂದ ನಟರೇ ಹೊರತು, ನಟರಿಂದ ನಾವಲ್ಲ ಅನ್ನೋ ಸತ್ಯ ಅರಿಯಬೇಕು ಎಂದು ಪೋಸ್ಟ್​​ ಹಾಕಿ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ