ಸಾವಿನಲ್ಲೂ ಸಾರ್ಥಕತೆ ಮೆರೆದ ಕೊಡಗಿನ ಯುವಕ: ರಾಜ್ಯದಲ್ಲಿ ಮೊದಲ ಬಾರಿಗೆ ಮೂಳೆ ದಾನ
ಅಪಘಾತದಲ್ಲಿ ಡ್ರೈನ್ ಡೆಡ್ ಆಗಿದ್ದ ಯುವಕನ ಅಸ್ಥಿ (ಮೂಳೆ) ದಾನಕ್ಕೆ ಕುಟುಂಬಸ್ಥರು ಒಪ್ಪಿಗೆ ನೀಡಿದ್ದು, ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಎಲುಬು ಮತ್ತು ಕೀಲು ತಜ್ಞರ ವಿಭಾಗದ ಮುಖ್ಯಸ್ಥ ಡಾ.ವಿಕ್ರಮ್ ಶೆಟ್ಟಿ ನೇತೃತ್ವದಲ್ಲಿ ಅಪರೂಪದ ದಾನವನ್ನು ಯಶಸ್ವಿಯಾಗಿ ಸಂಗ್ರಹಿಸಲಾಗಿದೆ. ಇದರಿಂದ ಕ್ಯಾನ್ಸರ್ ಪೀಡಿತ 6 ಮಕ್ಕಳ ಕಾಲುಗಳನ್ನು ಉಳಿಸಬಹುದು ಎಂದು ಅಸ್ಥಿ ಸಂಗ್ರಹಿಸಿದ ಬಳಿಕ ಡಾ.ಶೆಟ್ಟಿ ತಿಳಿಸಿದ್ದಾರೆ.