ಕಾವೇರಿ ನದಿಯಲ್ಲಿ ಈಜಲು ಹೋಗಿ ಹೆಣವಾದ ಯುವಕ

ಭಾನುವಾರ, 20 ಜನವರಿ 2019 (16:52 IST)
ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಪ್ರವಾಸಿಗನೊಬ್ಬ ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ  ಪ್ರವಾಸಿ ತಾಣ ಮುತ್ತತ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಹಾವೇರಿ ಮೂಲದ ಸಿದ್ದಲಿಂಗೇಶ್ (26) ಕಾವೇರಿ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಯುವಕನಾಗಿದ್ದಾನೆ.

ಸಿದ್ದಲಿಂಗೇಶ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. 8 ಜನ ಸ್ನೇಹಿತರ ಜೊತೆ 4 ಬೈಕ್ ಗಳಲ್ಲಿ  ಪ್ರವಾಸಕ್ಕೆ ಬಂದಿದ್ದರು. ಆ ತಂಡದಲ್ಲಿ ಸಿದ್ದಲಿಂಗೇಶ್ ಇದ್ದರು.

ಹಾವೇರಿ ಜಿಲ್ಲೆಯ ಹಾನಗಲ್  ನ ಬೆಳಗಲ್ ಪೇಟೆಯವನಾದ ಸಿದ್ದಲಿಂಗೇಶ್ ಕಾವೇರಿ ನದಿಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ