ತಲೆಗೂದಲು ಉದುರುತ್ತಿದೆ ಎಂದು ಬೇಸತ್ತ ಯುವತಿ!?

ಭಾನುವಾರ, 3 ಜುಲೈ 2022 (10:31 IST)
ಮೈಸೂರು : ತಲೆಕೂದಲು ಉದುರುವ ಸಮಸ್ಯೆಯಿಂದ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಗಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.

ಕಾವ್ಯಶ್ರೀ(22) ಮೃತ ಯುವತಿ. ಈ ಘಟನೆ ಮೈಸೂರಿನ ರಾಘವೇಂದ್ರ ನಗರ ಬಡಾವಣೆಯಲ್ಲಿ ನಡೆದಿದೆ. ಕಳೆದ ಹಲವು ದಿನಗಳಿಂದ ಪತ್ಮಂಡೆ ಸಮಸ್ಯೆಯಿಂದ ಬಳಲುತ್ತಿದ್ದ ಕಾವ್ಯಶ್ರೀಗೆ ಕೂದಲು ಉದುರುತ್ತಿತ್ತು.

ಸಾಕಷ್ಟು ಚಿಕಿತ್ಸೆ ಪಡೆದರೂ ಪರಿಹಾರ ದೊರೆತಿರಲಿಲ್ಲ. ಇದರಿಂದ ಬೇಸತ್ತ ಆಕೆ ಸಾವಿನ ದಾರಿ ಹಿಡಿದಿದ್ದಾಳೆ. ಕೂದಲು ಸಂಪೂರ್ಣವಾಗಿ ಕಳೆದುಕೊಂಡ ಹಿನ್ನೆಲೆ ಮನನೊಂದು ಕಾವ್ಯಶ್ರೀ ತನ್ನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ