ಮೃತ ದಿಲೀಪ್(35) ನಗರದ ಕಮ್ಮನಹಳ್ಳಿಯ ಆಲ್ವಿನ್ ರಸ್ತೆಯ ನಿವಾಸಿಯಾಗಿದ್ದಾನೆ. ಈತ ನಿನ್ನೆ ನಗರದ ಬಾಣಸವಾಡಿ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ಸಂಚರಿಸುತ್ತಿದ್ದಾಗ ದುಷ್ಕರ್ಮಿಗಳ ತಂಡವೊಂದು ಏಕಾಕಏಕಿ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಪರಿಣಾಮ ದಿಲೀಪ್ ಗಂಭೀರವಾಗಿ ಗಾಯಗೊಂಡು ರಕ್ತ ಸ್ರಾವವಾಗಿ ಒದ್ದಾಡುತ್ತಿದ್ದ. ಇದನ್ನು ಕಂಡ ಸ್ಥಳೀಯರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾನೆ.