ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ದಿಟ್ಟ ನಿರ್ಧಾರದ ವಿರುದ್ಧ ಆಕ್ರೋಶ್ ದಿವಸ್ಗೆ ಕರೆ ನೀಡಿರುವ ಪ್ರತಿಪಕ್ಷಗಳ ನಡೆಯನ್ನು ಜನ ವಿರೋಧಿಯಾಗಿದೆ. ತಮ್ಮ ತಮ್ಮ ಕಪ್ಪು ಹಣವನ್ನು ಉಳಿಸಿಕೊಳ್ಳಲು ಕಾಂಗ್ರೆಸ್, ಆಪ್ ಸೇರಿದಂತೆ ಕೆಲವು ಎಡಪಂಥೀಯ ಪಕ್ಷಗಳು ಹುನ್ನಾರ ಮಾಡುತ್ತಿವೆ ಎಂದು ದೂರಿದರು.