ಅಬ್ಬಾ! ಕರಿಂಜೆ ಸ್ವಾಮೀಜಿ ಕುರಿತು ಕಾಂಗ್ರೆಸ್ ಶಾಸಕ ಅಭಯಚಂದ್ರ ಜೈನ್ ಇದೆಂಥಾ ಮಾತನಾಡಿದ್ದು!

ಬುಧವಾರ, 14 ಮಾರ್ಚ್ 2018 (10:56 IST)
ಮಂಗಳೂರು : ಇತ್ತಿಚೆಗಷ್ಟೇ ಮೂಡಬಿದಿರೆಯ ಕರಿಂಜೆ ಮುಕ್ತಾನಂದ ಸ್ವಾಮೀಜಿ ಅವರು ಕಾರ್ಯಕ್ರಮವೊಂದರಲ್ಲಿ ರಾಕ್ಷಸ ಸಿಎಂ ಮತ್ತು ರಾಕ್ಷಸ ಎಂಎಲ್‍ಎ ಎಂಬ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಅಭಯಚಂದ್ರ ಜೈನ್ ಅವರು ಸ್ವಾಮೀಜಿ ಅವರ ಕುರಿತು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.


ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಅಭಯಚಂದ್ರ ಜೈನ್ ಅವರು,’ಅವಾ ಯಾರೋ ಒಬ್ಬ ಕರಿಂಜೆ ಸ್ವಾಮೀಜಿ ಭಾಷಣದಲ್ಲಿ ಹೇಳಿದನಂತೆ. ಒಬ್ಬ ರಾಕ್ಷಸ ಮುಖ್ಯಮಂತ್ರಿ ಇದ್ದಾನೆ. ಒಬ್ಬ ರಾಕ್ಷಸ ಎಂಎಲ್‍ಎ ಇದ್ದಾನೆ ಅಂತ. ನನಗೆ ಬೈಯಲಿ, ಅದು ಬಿಟ್ಟು ಮುಖ್ಯಮಂತ್ರಿಗೆ ಇನ್ನೊಮ್ಮೆ ಬೈದರೆ ಅವನು ಎಷ್ಟು ದೊಡ್ಡ ಸ್ವಾಮೀಜಿ ಆದರೂ ಬಿಡುವುದಿಲ್ಲ. ಅವನಿಗೆ ಕಪ್ಪು ಬಾವುಟ ಹಿಡಿಯುವಂತೆ ನಾನು ಮಾಡ್ತೇನೆ. ತಾಕತ್ತಿದ್ದರೆ ಕರಿಂಜೆ ಸ್ವಾಮೀಜಿ ಚುನಾವಣೆಗೆ ನಿಲ್ಲಲಿ. ಅವನು ಸರ್ಕಾರಿ ಜಾಗ ಕಬಳಿಸಿದ್ದಾನೆ. ಅದನ್ನು ತನಿಖೆ ಮಾಡಬೇಕು ಅಂತ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ’ ಎಂದು ಸ್ವಾಮೀಜಿ ಅವರ ಬಗ್ಗೆ ಅಗೌರವದಿಂದ ಮಾತನಾಡಿದ್ದಾರೆ.


ಇವರ ಈ ಹೇಳಿಕೆಯ ವಿರುದ್ಧ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿವೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ