ಸಾವಿರಾರು ಮಂದಿ ಜನರು ನೆರೆದಿದ್ದರೂ ಕೂಡ ಹಠಾತ್ತಾಗಿ ಆಗಮಿಸಿದ ದುಷ್ಕರ್ಮಿಗಳ ಗುಂಪೊಂದು ನಿಂತಿದ್ದ ಮಹಿಳೆಯ ಮೇಲೆ ಏಕಾಏಕಿ ಎರಗಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದೆ. ಈ ಮೂಲಕ ಮಹಿಳೆಯನ್ನು ಹತ್ಯೆಗೈಯ್ಯಲಾಗಿದ್ದು, ಘಟನೆಯು ಇಂದು ಮಧ್ಯಾಹ್ನ ಸರಿ ಸುಮಾರು 12.30ರ ವೇಳೆಯಲ್ಲಿ ನಡೆದಿದೆ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ. ದುಷ್ಕರ್ಮಿ ಹಾಗೂ ಮಹಿಳೆಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.
ಇನ್ನು ಸ್ಥಳಕ್ಕೆ ನಿಪ್ಪಾಣಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಪೊಲೀಸರು, ಹಿಂದಿನ ದ್ವೇಷ ಹಿನ್ನೆಲೆಯಲ್ಲಿ ಮಹಿಳೆಯನ್ನು ಹತ್ಯೆಗೈಯ್ಯಲಾಗಿದೆ ಎಂಬುದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.