ಅರಣ್ಯ ಇಲಾಖಾಧಿಕಾರಿಗೆ ಎಸಿಬಿ ಶಾಕ್

ಸೋಮವಾರ, 2 ಜುಲೈ 2018 (20:58 IST)
ಅರಣ್ಯ ಇಲಾಖೆ ಅಧಿಕಾರಿ ನಿವಾಸದ ಮೇಲೆ ಎಸಿಬಿ ದಾಳಿ ನಡೆದಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿಗೆ ಎಸಿಬಿ ದಾಳಿ ಶಾಕ್ ನೀಡಿದೆ. 
 
ಹುಬ್ಬಳ್ಳಿಯಲ್ಲಿ ವಲಯ ಅರಣ್ಯ ಅಧಿಕಾರಿಯಾಗಿರುವ ಸಿ.ಎಚ್.ಮಾವಿನತೋಪು ಎಂಬುವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ಮೃತ್ಯುಂಜಯ ನಗರದಲ್ಲಿರುವ ನಿವಾಸದ ಮೇಲೆ ಎಸಿಬಿ ಡಿವೈಎಸ್ ಪಿ ವಿಜಯಕುಮಾರ್ ಬಿಸನಳ್ಳಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ದಾಳಿಯ ಸಂದರ್ಭದಲ್ಲಿ ದಾಖಲೆಗಳನ್ನು ಪಡೆದ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದರು. 
ಎಸಿಬಿ ದಾಳಿ, ಅರಣ್ಯ ಅಧಿಕಾರಿ, ದಾಖಲೆ, ಪರಿಶೀಲನೆ 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ