ತಮಿಳುನಾಡಿನ ದಿಂಡಿಗಲ್ ಬಳಿ ಇರುವ ವತ್ತಲಗುಂಡು ರಸ್ತೆಯ ಸಿದ್ದಯ್ಯನಕೋಟೆ ಬಳಿ ಈ ದುರಂತ ಸಂಭವಿಸಿದ್ದು, ಟೊಯೋಟಾ ಕ್ವಾಲಿಸ್ ನಲ್ಲಿದ್ದ 9 ಮಂದಿ ಮೃತರಾಗಿದ್ದಾರೆ. ಮೃತರೆಲ್ಲರೂ ತಮಿಳುನಾಡಿನ ಅರವಕುಂಚಿ ನಿವಾಸಿಗಳಾಗಿದ್ದು, ಕೊಡೈಕೆನಾಲ್ನಿಂದ ಸಿದ್ದಯ್ಯನಕೋಟೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.