ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯ ಮನೆಯಲ್ಲಿ ಕಳ್ಳತನ ಮಾಡಿದ್ದಕ್ಕೆ ಸಂಬಂಧಿಸಿದಂತೆ ಆರೋಪಿ ರೇವಣ್ಣ ಎಂಬವನನ್ನು ಪೊಲೀಸರು ಬಂಧಿಸಿದ್ದು, ತಾನೇ ಕಳ್ಳತನ ಮಾಡಿದ್ದು ಎಂದು ಒಪ್ಪಿಕೊಂಡಿದ್ದಾನೆ. ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ರೇವಣ್ಣನನ್ನು ಬಂಧಿಸಲಾಯಿತು. ಒಂದು ಕ್ಯಾಮೆರಾ ಒಡೆದುಹಾಕಿದ್ದರೂ ಮತ್ತೊಂದು ಕ್ಯಾಮೆರಾದಲ್ಲಿ ಅವನ ಮುಖಚಹರೆ ಸ್ಪಷ್ಟವಾಗಿತ್ತು.