ಕೂಲಿ ಕೆಲಸ ಮಾಡಿಕೊಂಡಿರುವ ಬಡ ಮಹಿಳೆಯ ಮೇಲೆ ನಡೆದ ಈ ಅಮಾನುಷ ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಪಿಯುಸಿ ಓದುತ್ತಿರುವ ಆಕೆಯ ಮಗಳನ್ನು ಮದುವೆ ಮಾಡಿಕೊಡುವಂತೆ ಕೆಲವು ಯುವಕರು ಆಕೆಗೆ ಒತ್ತಾಯಿಸಿದ್ದರು. ಆದರೆ ಆಕೆ ಓದಬೇಕೆಂಬ ಕಾರಣ ನೀಡಿ ಮದುವೆ ಮಾಡಿಕೊಡಲು ನಿರಾಕರಿಸಲಾಗಿತ್ತು. ಈ ಕಾರಣಕ್ಕೆ ಕೋಪದಿಂದ ದುಷ್ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ.