ಆ್ಯಸಿಡ್ ಎರಚಿ, ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಕಿರಾತಕರು

ಶನಿವಾರ, 4 ಜನವರಿ 2020 (13:36 IST)
ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಆ್ಯಸಿಡ್ ಎರಚಿ ಆ ಬಳಿಕ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಲಾಗಿದೆ.

ಜ್ಯೋತೆಪ್ಪಾ ಎಂಬುವರೇ ಆ್ಯಸಿಡ್ ದಾಳಿಗೆ ಒಳಗಾಗಿದ್ದು, ಸದ್ಯ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಬೆಂಗಳೂರಿನ ಹೊಸಹಳ್ಳಿಯ ಜ್ಯೋತೆಪ್ಪಾರ ಬೈಕ್ ಹಿಂಬಾಲಿಸಿಕೊಂಡ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿ, ಆ್ಯಸಿಡ್ ಹಾಕಿ, ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಸ್ಥಳದಲ್ಲಿದ್ದ ಜನರು ಜ್ಯೋತೆಪ್ಪಾರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ