`ಸಿದ್ದಗಂಗಾ ಶ್ರೀಗಳಿಗೆ ಯಾರು ಭಾರತರತ್ನ ಕೊಡಬೇಕಿಲ್ಲ. ಭಾರತ ದೇಶಕ್ಕೆ ಅವರೆ ರತ್ನ’

ಗುರುವಾರ, 14 ಸೆಪ್ಟಂಬರ್ 2017 (19:08 IST)
ಸಿದ್ದಗಂಗಾ ಶ್ರೀಗಳಿಗೆ ಯಾರು ಭಾರತರತ್ನ ಕೊಡಬೇಕಿಲ್ಲ. ಭಾರತ ದೇಶಕ್ಕೆ ಅವರೆ ರತ್ನ ಎಂದು ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಸಿದ್ದಗಂಗಾ ಶ್ರೀಗಳಂತಹ ಮಹನೀಯರನ್ನ ಪಡೆದ ನಾವೇ ಧನ್ಯ. ಅವರನ್ನ ಅವಮಾನಿಸೋದು ಒಂದೆ ಶಿವನನ್ನ ಅವಮಾನೀಸೋದು ಒಂದೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
 

ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿದ್ದಗಂಗಾ ಶ್ರೀಗಳು ಲಿಂಗಾಯತ ಧರ್ಮಕ್ಕೆ ಸಮ್ಮತಿ ಸೂಚಿಸಿದ್ದರು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದರು. ಬಳಿಕ ಮಠದಿಂದಲೇ ಪತ್ರಿಕಾ ಹೇಳಿಕೆ ಬಿಡುಗಡೆಯಾಗಿತ್ತು. ಸಚಿವರು ನಮ್ಮ ಹೇಳಿಕೆ ತಿರುಚಿದ್ದಾರೆಂದು ಉಲ್ಲೇಖಿಸಿದ್ದರಿಂದ ಸಚಿವರು ಭಾರೀ ಮುಜುಗರಕ್ಕೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಾತೆ ಮಹಾದೇವಿ, ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಆಮಿಷವೊಡ್ಡಿ ಮಾತು ಬದಲಿಸಲಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಕುರಿತಂತೆ ಮಾತೆ ಮಹಾದೇವಿ ವಿರುದ್ಧ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಿದ್ದಗಂಗ ಶ್ರೀಗಳಿಗೆ ಯಾರು ಭಾರತರತ್ನ ಕೊಡಬೇಕಿಲ್ಲಾ!ಭಾರತದೇಶಕ್ಕೆ ಅವರೆ ರತ್ನ!ಅಂತ ಮಹನೀಯನ ಪಡೆದ ನಾವೆ ಧನ್ಯ.ಅವರನ್ನ ಅವಮಾನಿಸೋದು ಒಂದೆ ಶಿವನನ್ನ ಅವಮಾನೀಸೋದು ಒಂದೆ! https://t.co/OPG42EONuK

— ನವರಸನಾಯಕ ಜಗ್ಗೇಶ್ (@Jaggesh2) September 14, 2017

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ