ರಾಜಕೀಯ ಬಿಟ್ಟು ಶಾಲಾ ಮಕ್ಕಳೊಂದಿಗೆ ಮಾತುಕತೆ ನಡೆಸಿದ ನಟ ಪ್ರಕಾಶ್ ರೈ

ಸೋಮವಾರ, 18 ಜೂನ್ 2018 (14:36 IST)
ಚಿಕ್ಕಬಳ್ಳಾಪುರ : ಯಾವಾಗಲೂ ರಾಜಕೀಯ ಹಾಗೂ ರಾಜಕಾರಣಿಗಳ ಬಗ್ಗೆ ಮಾತುನಾಡುವುದರಲ್ಲೇ ಮುಳಗಿದ್ದ  ನಟ ಪ್ರಕಾಶ್ ರೈ ಅವರು ಇದೀಗ ಚಿಕ್ಕಬಳ್ಳಾಪುರದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದಾರೆ.


‘ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ದಿಗಾಗಿ ನನ್ನದೊಂದು ಅಳಿಲು ಸೇವೆ. ಜನರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಮಕ್ಕಳಲ್ಲಿ ಸಮಾನತೆಯ ಶಿಕ್ಷಣ ಬರಬೇಕು ಅನ್ನೋದು ನಮ್ಮ ಆಸೆ. ಒಂದು ಹತ್ತು ಶಾಲೆಗಳನ್ನು ಮಾದರಿ ಶಾಲೆಗಳನ್ನು ಮಾಡಬೇಕೆಂಬ ಆಸೆ ಇದೆ ಎಂದು ಪ್ರಕಾಶ್ ರೈ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ