ಸಿಎಂ ಸೂಚನೆಗಾಗಿ ಕಾಯುತ್ತಿರುವ ನಟ ಶಶಿಕುಮಾರ್

ಮಂಗಳವಾರ, 30 ಜನವರಿ 2018 (09:26 IST)
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ನಟ ಶಶಿಕುಮಾರ್ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಸೂಚನೆ ನೀಡುತ್ತಾರೆಂದು ಕಾಯುತ್ತಿರುವುದಾಗಿ ಹೇಳಿದ್ದಾರೆ.
 

ಸಿಎಂ ಸೂಚನೆಯಂತೆ ಈಗಾಗಲೇ ಮೊಳಕಾಲ್ಮೂರು ಮತ್ತ ಚಳ್ಳಕೆರೆ ಪ್ರವಾಸ ಮಾಡಿರುವುದಾಗಿ ಹೇಳಿಕೊಂಡಿರುವ ಅವರು, ಪಕ್ಷ ಈ ಎರಡು ಕ್ಷೇತ್ರಗಳ ಪೈಕಿ ಎಲ್ಲಿ ಟಿಕೆಟ್ ಕೊಟ್ಟರೂ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ.

ಹಿಂದೊಮ್ಮೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಸಂಸದರಾಗಿದ್ದ  ಶಶಿಕುಮಾರ್ ಇದೀಗ ವಿಧಾನಸಭೆಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ