ಜೈಲು ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದ ಎಡಿಜಿಪಿ ಮೇಘರಿಕ್

ಶುಕ್ರವಾರ, 21 ಜುಲೈ 2017 (13:48 IST)
ಜೈಲಿನಲ್ಲಿರುವ ಎಲ್ಲ ಕೈದಿಗಳೂ ಸಮಾನ, ಯಾರಿಗೂ ವಿಶೇಷ ಸೌಲಭ್ಯ ಒದಗಿಸುವಂತಿಲ್ಲ ಎಂದು ಕಾರಾಗೃಹದ ಎಡಿಜಿಪಿ ಎನ್.ಎಸ್. ಮೇಘರಿಕ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿದ್ದ ಮೇಘರಿಕ್, ಜೈಲಿನಲ್ಲಿ ಪರಿಶೀಲನೆ ನಡೆಸಿ ಸಿಬ್ಬಂದಿಗೆ ಖಡಕ್ ಸೂಚನೆ ಕೊಟ್ಟರು. ಒಂದೇ ಅಡುಗೆ ಮನೆಯಲ್ಲಿ ಎಲ್ಲರಿಗೂ ಊಟ ತಯಾರಾಗಬೇಕು. ಜೈಲಿನಲ್ಲಿ ಎಲ್ಲರೂ ಸಮಾನರು. ಯಾರಿಗೂ ವಿಶೇಷ ಸೌಲಭ್ಯ ನೀಡುವಂತಿಲ್ಲ ಎಂದು ಸೂಚಿಸಿದರು.

ಇದೇವೇಳೆ, ಕೈದಿಗಳ ಭೇಟಿಗೆ ಬರುವವರ ಬಳಿ ಹಣ ಪಡೆದರೆ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮೇಘರಿಕೆ ಎಚ್ಚರಿಕೆ ನೀಡಿದ್ದಾರೆ. ಕೈದಿಗಳ ಭೇಟಿಗೆ ಬರುವ ಪ್ರತಿಯೊಬ್ಬರನ್ನೂ ಪರಿಶೀಲನೆ ನಡೆಸಬೇಕು, ಹೆಸರನ್ನ ರಿಜಿಸ್ಟ್ರಾರ್`ನಲ್ಲಿ ನಮೂದಿಸಬೇಕು. ಜೈಲಿಗೆ ತರುವ ಪ್ರತಿಯೊಂದು ವಸ್ತುವನ್ನ ಪರಿಶೀಲನೆ ನಡೆಸಬೇಕೆಂದು ಸೂಚಿಸಿದ್ದಾರೆ.

ಜೈಲಿನಲ್ಲಿ ಅಕ್ರಮ ನಡೆಯುತ್ತದೆ ಎಂದು ಡಿಐಜಿ ರೂಪಾ ವರದಿ ನೀಡಿದ ಬಳಿಕ ಎಚ್ಚೆತ್ತಿರುವ ಅಧಿಕಾರಿಗಳು ಜೈಲಿನ ನಿಯಮಾವಳಿಗಳನ್ನ ಮತ್ತಷ್ಟು ಕಠಿಣಗೊಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ