ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗಷ್ಟೇ ಅಡ್ಮಿಷನ್
ಇತ್ತೀಚೆಗಷ್ಟೇ ಶಾಲೆಯಲ್ಲಿ ಬೈಬಲ್ ಕಲಿಯುವುದನ್ನು ಕಡ್ಡಾಯಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ ಕ್ಲಾರೆನ್ಸ್ ಶಾಲೆಗೆ ನೋಟಿಸ್ ನೀಡಲಾಗಿತ್ತು. ಇದೀಗ ಬೈಬಲ್ ವಾರ್ ಮುಂದುವರಿದಿದ್ದು, ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗೆ ಮಾತ್ರ ಪ್ರವೇಶ ನೀಡಿ, ಹಿಂದೂ ಮಕ್ಕಳಿಗೆ ಪ್ರವೇಶ ಮಾಡಿಕೊಳ್ಳದಂತೆ ಶಾಲಾ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.
ಈ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿ, ಬೈಬಲ್ ಬಗ್ಗೆ ಕ್ರಿಶ್ಚಿಯನ್ ಮಕ್ಕಳಿಗಷ್ಟೆ ನೈತಿಕ ಬೋಧನೆ ಮಾಡಲಾಗ್ತಿತ್ತು. ನಮ್ಮ ಶಾಲೆಯಲ್ಲಿ ಬೈಬಲ್ ನೈತಿಕ ಬೋಧನೆ ಮಾಡುತ್ತಿದ್ದೆವು. ಧರ್ಮ ಬೋಧನೆ ಮಾಡುತ್ತಿರಲಿಲ್ಲ ಎಂದು ತಿಳಿಸಿದೆ.