ಹೌದು, ಬಿಜೆಪಿ ಪಕ್ಷದ ವತಿಯಿಂದ ನಗರದಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಪ್ರಧಾನಿ ಮೋದಿ ಅವರೂ ಕೂಡ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕಾರಿಣಿಯ ಕೇಂದ್ರ ಬಿಂದುವಾಗಿರುವ ಪ್ರಧಾನಿ ಮೋದಿ ಅವರ ಅದ್ದೂರಿ ಸ್ವಾಗತಕ್ಕಾಗಿ ರಾಜ್ಯ ಬಿಜೆಪಿ ಘಟಕದ ನಾಯಕರು ನಿರ್ಧರಿಸಿ ಜಾಹೀರಾತು ಫಲಕ ಹಾಕಿದ್ದಾರೆ. ಆದರೆ ಅಳವಡಿಸಿರುವ ಜಾಹೀರಾತುಗಳು ನಿಗಧಿತ ಪ್ರಮಾಣಕ್ಕಿಂತ ಅಧಿಕವಾಗಿದ್ದು, ಅಳವಡಿಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮಥಾಯಿ, ಜಾಹೀರಾತು ಅಳವಡಿಕೆ ಸಂಬಂಧ ಪಾಲಿಕೆಯ ಆಯುಕ್ತ ಲಕ್ಷ್ಮಿ ನಾರಾಯಣ ಅವರಿಂದ ಅನುಮತಿ ಪಡೆದಿದ್ದಾರೆ. ಆದರೆ ಅಳವಡಿಸಿರುವ ಜಾಹಿರಾತ ಫಲಕಗಳು 2000ಕ್ಕೂ ಹೆಚ್ಚಿದ್ದು, ಅನುಮತಿಗೂ ಮೀರಿವೆ. ಈ ಹಿನ್ನೆಲೆಯಲ್ಲಿ ಅನುಮತಿ ಪಡೆದಿರುವುದಕ್ಕಿಂತ ಅಧಿಕವಾಗಿರುವುದರಿಂದ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದ್ದೇವೆ ಎಂದಿದ್ದಾರೆ.