ಶಿಕ್ಷಣ ಸಂಸ್ಥೆಗಳ ಉನ್ನತೀಕರಣ ಕ್ಕೆ ಕೈಜೋಡಿಸಿ: ಆಕ್ಸಿಸ್ ಬ್ಯಾಂಕ್ ಗೆ ಮುಖ್ಯಮಂತ್ರಿ ಸಲಹೆ

ಬುಧವಾರ, 25 ಮೇ 2022 (19:15 IST)
ಆಕ್ಸಿಸ್ ಬ್ಯಾಂಕ್ ಸಂಸ್ಥೆಯು  ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.
 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಆಕ್ಸಿಸ್ ಬ್ಯಾಂಕ್ ನ ವ್ಯಸ್ಥಾಪಕ ನಿರ್ದೇಶಕರ ಹಾಗೂ ಸಿಇಓ ಅಮಿತಾಬ್ ಚೌಧರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
 
ಆಕ್ಸಿಸ್ ಬ್ಯಾಂಕ್ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಹಲವು ಯೋಜನೆಗಳನ್ನು ಕೈಗೊಳ್ಳಲು ಅವಕಾಶವಿದೆ. ಸಂಸ್ಥೆಯು  ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ