ತಮ್ಮ ಪ್ರೀತಿಗೆ ಪೋಷಕರ ವಿರೋಧದ ಭಯ, ರೈಲಿಗೆ ತಲೆಯಿಟ್ಟು ಪ್ರೇಮಿಗಳು ಸಾವು

Sampriya

ಗುರುವಾರ, 25 ಸೆಪ್ಟಂಬರ್ 2025 (19:52 IST)
ಮಾಲೂರು (ಕೋಲಾರ): ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಿಪಡಿಸಬಹುದೆಂಬ ಆತಂಕದಲ್ಲಿ ಪ್ರೇಮಿಗಳು ರೈಲಿಗೆ ಅಡ್ಡಲಾಗಿ ಮಲಗಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಬ್ಯಾಟರಾಯನಹಳ್ಳಿ ರೈಲು ನಿಲ್ದಾಣದಲ್ಲಿ ವರದಿಯಾಗಿದೆ.

ಟೇಕಲ್ ಹೋಬಳಿಯ ಶೆಟ್ಟಿಹಳ್ಳಿ ಗ್ರಾಮದ ಸತೀಶ್ (18) ಹಾಗೂ ಪನಮಾಕನಹಳ್ಳಿ ಗ್ರಾಮದ ಶ್ವೇತಾ (17) ಆತ್ಮಹತ್ಯೆ ಮಾಡಿಕೊಂಡವರು.

ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಈ ಜೋಡಿ, ಶ್ವೇತಾ ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೆ, ಸತೀಶ್‌ ತಿಗಳರ ಸಮುದಾಯದವರು ಎಂಬುದು ಗೊತ್ತಾಗಿದೆ. ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆ ಮುಂದೆ ಕಷ್ಟವಾಗಬಹುದು ಎಂಬ ಭಯದಲ್ಲಿ ಈ ಕೃತ್ಯ ಎಸಗಿಕೊಂಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ