ಬಿಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆಯಿಂದಲೂ ಸರ್ಕಾರದ ವಿರುದ್ಧವೇ ಬಾಂಬ್

Krishnaveni K

ಸೋಮವಾರ, 23 ಜೂನ್ 2025 (13:56 IST)
ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಬಿಆರ್ ಪಾಟೀಲ್ ಬಳಿಕ ಈಗ ಮತ್ತೊಬ್ಬ ಶಾಸಕ ರಾಜು ಕಾಗೆಯಿಂದಲೂ ಸರ್ಕಾರದ ವಿರುದ್ಧವೇ ಆರೋಪ ಕೇಳಿಬಂದಿದೆ. ಇದು ಕಾಂಗ್ರೆಸ್ ಗೆ ನುಂಗಾರದ ತುತ್ತಾಗಿ ಪರಿಣಮಿಸಿದೆ.

ಶಾಸಕ ಬಿಆರ್ ಪಾಟೀಲ್ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅಧಿಕಾರಿಗಳು ನಮ್ಮ ಮಾತನ್ನು ಕೇಳುತ್ತಿಲ್ಲ ಎಂದ ಅಡಿಯೋ ಒಂದು ವೈರಲ್ ಆಗಿತ್ತು. ಇದು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಇದರ ಬೆನ್ನಲ್ಲೇ ಬಿಆರ್ ಪಾಟೀಲ್ ಗೆ ಸಿಎಂ ಸಿದ್ದರಾಮಯ್ಯ ಮಾತುಕತೆಗೆ ಬುಲಾವ್ ನೀಡಿದ್ದರು.

ಇದೀಗ ಬಿಆರ್ ಪಾಟೀಲ್ ಬಳಿಕ ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ನನಗೂ ಪಕ್ಷದಲ್ಲಿ ರಾಜೀನಾಮೆ ಕೊಡುವ ಪರಿಸ್ಥಿತಿ ಬಂದಿದೆ ಎಂದಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ. ಅನುದಾನ ಬಂದಿದ್ದರೂ ಕೆಲಸವಾಗುತ್ತಿಲ್ಲ. ಬಿಆರ್ ಪಾಟೀಲ್ ಹೇಳಿದ್ದು ಸುಳ್ಳಲ್ಲ ಅದೇ ಪರಿಸ್ಥಿತಿ ನನಗೂ ಇದೆ ಎಂದಿದ್ದಾರೆ.

ಇನ್ನು, ಮತ್ತೊಬ್ಬ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡಾ ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಕಿಡಿ ಕಾರಿದ್ದಾರೆ. ಜಮೀರ್ ಅಹ್ಮದ್ ರಾಜೀನಾಮೆ ಕೊಡುವುದು ಒಳ್ಳೆಯದು. ಜಮೀರ್ ಹಗರಣ ಮಾಡಿಲ್ಲ ಎಂದಾದರೆ ಮತ್ತೆ ಸ್ಥಾನ ಪಡೆಯಲಿ ಎಂದಿದ್ದಾರೆ. ಇದೀಗ ಸರ್ಕಾರಕ್ಕೆ ಹೊಸ ತಲೆನೋವು ಶುರುವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ