ರಾಜ್ಯ ಬಜೆಟ್ ನಂತರ ಸಚಿವ ಸಂಪುಟ ವಿಸ್ತರಣೆ: ಸಿಎಂ

ಬುಧವಾರ, 24 ಫೆಬ್ರವರಿ 2016 (18:53 IST)
ರಾಜ್ಯದ ಬಜೆಟ್ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ನೆನೆಗುದಿಗೆ ಬಿದ್ದಿದ್ದು, ಇದೀಗ ಬಜೆಟ್ ನಂತರ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
 
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಅಂತಹ ಮೈತ್ರಿಯ ಬಗ್ಗೆ ಕೆದಕುವ ಗೋಜಿಗೆ ಹೋಗುವುದಿಲ್ಲ ಎಂದರು.
 
ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್ ಯಾವ ವಿಚಾರಕ್ಕಾಗಿ ದೆಹಲಿಗೆ ತೆರಳಿದ್ದಾರೆ ಎನ್ನುವ ಬಗ್ಗೆ ನನಗೆ ಮಾಹಿತಿಯಿಲ್ಲ. ದೆಹಲಿಗೆ ಹೋಗುವಾಗ ನಮ್ಮನ್ನು ಕೇಳಿಯೇ ಹೋಗಬೇಕು ಎನ್ನುವ ನಿಯಮಗಳಿಲ್ಲ. ನಾನು ಕೂಡಾ ಶೀಘ್ರದಲ್ಲಿ ದೆಹಲಿಗೆ ತೆರಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ