ಉಪಚುನಾವಣೆ ನಂತ್ರ ಪರಮೇಶ್ವರ್‌ಗೆ ಗೇಟ್ ಪಾಸ್: ಆರ್.ಅಶೋಕ್ ಬಾಂಬ್

ಭಾನುವಾರ, 2 ಏಪ್ರಿಲ್ 2017 (13:44 IST)
ಉಪಚುನಾವಣೆಯ ನಂತರ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಆರ್ .ಅಶೋಕ್ ಹೊಸ ವಿವಾದದ ಬಾಂಬ್ ಸಿಡಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್ ಅವರ ಗೇಟ್ ಪಾಸ್ ಸಿದ್ದವಾಗುತ್ತಿದ್ದು, ಏ.10 ರಂದು ಜಗಜ್ಜಾಹಿರವಾಗಲಿದೆ ಎಂದು ಭವಿಷ್ಯ ನುಡಿದರು.
 
ಕಾಂಗ್ರೆಸ್ ಪಕ್ಷದ ಮಾಜಿ ಸಂಸದೆ ರಮ್ಯ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಬಗ್ಗೆ ಖಚಿತ ಮಾಹಿತಿಯಿಲ್ಲ ಎಂದು ಸ್ಪಷ್ಟಪಡಿಸಿದರು. ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದರು.
 
ಉಪಚುನಾವಣೆಯ ಬಳಿಕ ಸಿಎಂ ಸಿದ್ದರಾಮಯ್ಯ ದುರಾಡಳಿತ ಅಂತ್ಯಗೊಳ್ಳಲಿದೆ. ಈ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ