ಉಪಚುನಾವಣೆಯ ಫಲಿತಾಂಶದ ಬಳಿಕ ಡಿಕೆಶಿ ಬುಗುರಿ ಆಡಿಸಲಿ- ಶ್ರೀರಾಮುಲು ವ್ಯಂಗ್ಯ

ಗುರುವಾರ, 28 ನವೆಂಬರ್ 2019 (11:32 IST)
ದಾವಣಗೆರೆ : ಉಪಚುನಾವಣೆಯ ಫಲಿತಾಂಶದ ಬಳಿಕ ಡಿಕೆಶಿ ಬುಗುರಿ ಆಡಿಸಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲು, ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.



ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿಯಂತಹ ಬಹಳಷ್ಟು ಜನರನ್ನು ನೋಡಿದ್ದೇನೆ. ಉಪಚುನಾವಣೆಯ ಫಲಿತಾಂಶದ ಬಳಿಕ ಡಿಕೆಶಿ ಬುಗುರಿ ಆಡಿಸಲಿ. ನಾವು ಉಪಚುನಾವಣೆಯಲ್ಲಿ ಗೆದ್ದು ತೋರಿಸ್ತೇವೆ ಎಂದು ಹೇಳಿದ್ದಾರೆ.


ಹಾಗೇ ಕಾಂಗ್ರೆಸ್ ಪಕ್ಷದಲ್ಲೀಗ ಸಿದ್ದರಾಮಯ್ಯ ಒಬ್ಬಂಟಿಯಾಗಿದ್ದಾರೆ. ಅವ್ರು ಒಬ್ಬಂಟಿಯಾಗಿದ್ರೂ ನನ್ನ ವಿರುದ್ಧ ವಾಗ್ದಾಳಿ ನಡೆಸ್ತಾರೆ ಎಂದು ಸಿದ್ದರಾಮಯ್ಯ ವಿರುದ್ದ ಶ್ರೀರಾಮುಲು ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ