ಮತ್ತೆ ಬ್ರಿಗೇಡ್ ಮೊರೆಹೋದ ಕೆ.ಎಸ್.ಈಶ್ವರಪ್ಪ

ಶುಕ್ರವಾರ, 17 ಮಾರ್ಚ್ 2017 (18:14 IST)
ಮಾಜಿ ಸಂಸದ ವೀರುಪಾಕ್ಷಪ್ಪ, ಮುಕಡಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಬ್ರಿಗೇಡ್, ಯುವ ಬ್ರಿಗೇಡ್ ಪದಾಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಎಲ್ಲಾ ಸಮುದಾಯದವರಿಗೆ ಆದ್ಯತೆ ನೀಡಲು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ
   
ಶಾಸಕರ ಭವನದಲ್ಲಿ ನಡೆದ ಸಭೆಗೆ ವಿವಿಧ ಜಿಲ್ಲೆಗಳಿಂದ ಬ್ರಿಗೆಡ್ ಕಾರ್ಯಕರ್ತರು ಆಗಮಿಸಿದ್ದರು. ಸಭೆಯಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಆರಂಭಿಸಲು ನಿರ್ಧರಿಸಲಾಗಿದೆ 
 
ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಬಿಜೆಪಿ ಹೈಕಮಾಂಡ್ ನಿರ್ದೇಶನ ನೀಡಿದ್ದರೂ ಕ್ಯಾರೆ ಎನ್ನದ ಈಶ್ವರಪ್ಪ ಪದೇ ಪದೇ ಭಾಗವಹಿಸುತ್ತಿರುವುದು ಬಿಜೆಪಿ ನಾಯಕರಿಗೆ ನುಂಗಲಾರದ ತುತ್ತಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.  

ವೆಬ್ದುನಿಯಾವನ್ನು ಓದಿ