ಬೆಂಗಳೂರು: ಮತ್ತೆ ಸಾಮೂಹಿಕ ಅತ್ಯಾಚಾರ

ಶನಿವಾರ, 11 ಏಪ್ರಿಲ್ 2015 (11:23 IST)
ರಾಜಧಾನಿ ಬೆಂಗಳೂರು ಮಹಿಳೆಯರಿಗೆ ಸುರಕ್ಷಿತ ಅಲ್ಲವೆಂದು ಮತ್ತು ಸಾಬೀತಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಹನುಮಂತನಗರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ  ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ವರದಿಯಾಗಿದೆ.

16 ವರ್ಷದ ಯುವತಿಯ ಜತೆ ಕೆಲ ದಿನಗಳಿಂದ ಗೆಳೆತನ ಹೊಂದಿದ್ದ ಆರೋಪಿಗಳು, ಏನೋ ಕಾರಣ ಹೇಳಿ ಆಕೆಯನ್ನು ಪುಸಲಾಯಿಸಿ ಕರೆದುಕೊಂಡು  ಅತ್ಯಾಚಾರ ನಡೆಸಿದ್ದಾರೆ. ಆ ಸಂದರ್ಭದಲ್ಲಿ ಅವರೆಲ್ಲರೂ ಮದ್ಯ ಸೇವಿಸಿದ್ದರೆಂದು ತಿಳಿದು ಬಂದಿದೆ.
 
ಘಟನೆಗೆ ಸಂಬಂಧಿಸಿದಂತೆ ಪೀಡಿತ ಯುವತಿ ಹನುಮಂತನಗರ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದಾಳೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಸಂತೋಷ್, ಸೂರ್ಯ, ಮಹೇಶ್, ಕಿರಣ್ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ. 

ವೆಬ್ದುನಿಯಾವನ್ನು ಓದಿ