ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಹೇಳನಕಾರಿ ಘೋಷಣೆ ಕೂಗಿದವರ ಕುರಿತು ಯಾವುದೇ ಸ್ಪಷ್ಟ ದಾಖಲೆಗಳಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಬೇಕು ತಿಳಿಯುತ್ತಿಲ್ಲ. ಖಚಿತವಾದ ಸಾಕ್ಷಿಗಳು ಲಭ್ಯವಾದ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಕರ್ತವ್ಯಕ್ಕೆ ಸಂಬಂಧಿಸಿದಂತೆ ನೈತಿಕತೆ ಕುಂದಿಸಿದ ರಾಜ್ಯ ಸರಕಾರ, ಮಾಜಿ ಸಚಿವ ಪರಮೇಶ್ವರ್ ನಾಯ್ಕ, ಡಿಜಿಪಿ ಓಂ ಪ್ರಕಾಶ್ ಹಾಗೂ ಬಳ್ಳಾರಿ ಐಜಿಪಿ ಮುರುಗನ್ ವಿರುದ್ಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಅನುಪಮಾ ಶೆಣೈ ದೂರು ಸಲ್ಲಿಸಿದ್ದರು.