ಬೆಂಗಳೂರು ಪೊಲೀಸರ ವಿರುದ್ಧ ಅಗ್ನಿಶ್ರೀಧರ್ ದೂರು

ಸೋಮವಾರ, 27 ಮಾರ್ಚ್ 2017 (13:12 IST)
ಕಡಬಗೆರೆ ಸೀನ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿನಾಕಾರಣ ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಅಗ್ನಿಶ್ರೀಧರ್ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.
ಏಕಾಏಕೀ ಮನೆಯೊಳಗೆ ನುಗ್ಗಿದ ಪೊಲೀಸರು ನನ್ನ ಹೇಳಿಕೆಯನ್ನು ಪಡೆಯದೆ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರವಿಟ್ಟುಕೊಂಡಿದ್ದೀಯಾ ಎಂದು ಆರೋಪಿಸಿ ಮನೆಗೆ ನುಗ್ಗಿ ತಪಾಸಣೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 
ಬಾಡಿಗಾರ್ಡ್‌ಗಳನ್ನು ಇಟ್ಟುಕೊಳ್ಳುವಂತಿಲ್ಲ ಎಂದು ಪೊಲೀಸರು ತಾಕೀತು ಮಾಡಿದ್ದಾರೆ. ಒಂದು ವೇಳೆ ನನ್ನ ಜೀವಕ್ಕೆ ಅಪಾಯ ಎದುರಾದರೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ