ಎಐಸಿಸಿ ಮುಖಂಡ ಗುಲಾಂ ನಬಿ ಅಜಾದ್ ಬೆಂಗಳೂರಿಗೆ ಭೇಟಿ

ಶುಕ್ರವಾರ, 28 ಫೆಬ್ರವರಿ 2020 (09:55 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕಗ್ಗಂಟಾಗಿದ್ದು ಈ ವೇಳೆ ಎಐಸಿಸಿ ಮುಖಂಡ ಗುಲಾಂ ನಬಿ ಅಜಾದ್ ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.


ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕಗ್ಗಂಟಾಗಿದ್ದು ಇನ್ನೂ ನೂತನ ಅಧ್ಯಕ್ಷರು ಯಾರೆಂದು ಘೋಷಣೆಯಾಗಿಲ್ಲ. ಈ ನಡುವೆ ಇದೀಗ ಎಐಸಿಸಿ ಮುಖಂಡ ಗುಲಾಂ ನಬಿ ಅಜಾದ್ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಇದು ಈಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ.  


ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಗುಲಾಂನಬಿ ಅಜಾದ್ ಈ ಬಗ್ಗೆ ಚರ್ಚೆ ನಡೆಸಲಿದ್ದು  ಬಳಿಕ ಹೈಕಮಾಂಡ್ ಗೆ ವರದಿ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ