DCM ಡಿಕೆಶಿ ಸಾರಥ್ಯದಲ್ಲಿ ಸರ್ವಪಕ್ಷ ಸಭೆ

ಸೋಮವಾರ, 5 ಜೂನ್ 2023 (16:06 IST)
ಇಂದು ಬೆಂಗಳೂರಿನ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆದಿದ್ದಾರೆ. ಈ ಸಭೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುರುವಾಗಿದೆ.. ಬೆಂಗಳೂರಿನ ಕಾಂಗ್ರೆಸ್​​​ ಜನಪ್ರತಿನಿಧಿಗಳು ಸಭೆಯಲ್ಲಿ ‌ಭಾಗಿಯಾಗಿದ್ದಾರೆ. ಇಲ್ಲಿ ಪ್ರಮುಖವಾಗಿ ಬೆಂಗಳೂರು ನಗರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಬೆಂಗಳೂರು ಎದುರಿಸುತ್ತಿರುವ ಜಲ್ವಂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದಿದೆ. ಅದಲ್ಲದೇ ಇದೇ ಸಭೆಯಲ್ಲಿ ಬ್ರ್ಯಾಂಡ್ ಬೆಂಗಳೂರು ಖ್ಯಾತಿ ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುವ ಉದ್ದೇಶವನ್ನೂ ಇಟ್ಟುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ