ಗೋಹತ್ಯೆ ಮಾತ್ರವಲ್ಲ ಎಲ್ಲ ಪ್ರಾಣಿಗಳ ಹತ್ಯೆ ನಿಷೇಧಿಸಲಿ- ರೆಡ್ಡಿ

ಸೋಮವಾರ, 8 ಜನವರಿ 2018 (20:59 IST)

ಗೋ ಹತ್ಯೆ ಮಾತ್ರವಲ್ಲ, ದೇಶದಲ್ಲಿರುವ ಎಲ್ಲ ಪ್ರಾಣಿಗಳ ಹತ್ಯೆ ಮಾಡುವುದು ನಿಷೇಧ ಮಾಡಲಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಪ್ರತಿದಿನ ಕೋಳಿ, ಕುರಿ, ಹಂದಿ ಸೇರಿದಂತೆ ಲಕ್ಷಾಂತರ ಪ್ರಾಣಿಗಳ ಹತ್ಯೆಯಾಗುತ್ತದೆ. ಆದ್ದರಿಂದ ಎಲ್ಲ ಪ್ರಾಣಿಗಳ ಹತ್ಯೆ ಮಾಡುವುದನ್ನು ನಿಲ್ಲಿಸುವ ಅಗತ್ಯವಿದೆ ಎಂದಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಗೋ ಹತ್ಯೆಯನ್ನು ನಿಷೇಧಿಸಲಿ ಮತ್ತು ಗೋ ಮಾಂಸ ರಫ್ತು ಮಾಡುವುದನ್ನು ನಿಯಂತ್ರಿಸಲಿ ಎಂದು ತಿಳಿಸಿದ್ದಾರೆ.

ಆದಿತ್ಯನಾಥ್ ಅವರು ಮೊದಲು ಉತ್ತರ ಪ್ರದೇಶವನ್ನು ಸರಿಪಡಿಸಲಿ. ನಂತರ ಬೇರೆ ರಾಜ್ಯಗಳ ಬಗ್ಗೆ ಮಾತನಾಡಲಿ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ