ಎಚ್ಡಿಕೆ ತೋಟದಲ್ಲಿ ಬಾಡೂಟ ವ್ಯವಸ್ಥೆ ಆರೋಪ: ಕುರ್ಚಿ, ಶಾಮಿಯಾನ ತೆಗೆದು ಹಾಕಿದ ಅಧಿಕಾರಿಗಳು
ಈ ವೇಳೆ ಒಳಗಡೆ ರಾಜಕೀಯ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇರಲಿಲ್ಲ. ರಾಜಕೀಯ ಪಕ್ಷದ ಬಾವುಟ, ಚಿಹ್ನೆ ಹಾಗೂ ಯಾವುದೇ ಸಾಮಗ್ರಿಗಳು ಇರಲಿಲ್ಲ. ಆದರೂ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ರೀತಿ ಊಟದ ವ್ಯವಸ್ಥೆಗೆ ಅವಕಾಶವಿಲ್ಲ ಎಂದು ಸ್ಥಳದಲ್ಲಿದ್ದವರಿಗೆ ಎಚ್ಚರಿಕೆ ನೀಡಿ, ಹಾಕಿದ್ದ ಶಾಮಿಯಾನ, ಕುರ್ಚಿ ಹಾಗೂ ಟೇಬಲ್ಗಳನ್ನು ತೆರವುಗೊಳಿಸಿದ್ದಾರೆ.