ಹೌದು, ಸಿಎಂ ಸಿದ್ದರಾಮಯ್ಯನವರು ಅಧಿವೇಶನ ಹಿನ್ನೆಲೆ ತಮ್ಮ ಎಲ್ಲಾ ಸಂಪುಟ ಸದಸ್ಯರಿಗೂ ಕೂಡ ಕಡ್ಡಾಯವಾಗಿ ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರೆ ಸಚಿವ ಅಂಬರೀಶ್ ಮಾತ್ರ ಸಿಎಂ ಸೂಚನೆಗೆ ಜಗ್ಗದೆ ಗೈರುಹಾಜರಾಗುವ ಮೂಲಕ ಅಚ್ಚರಿ ಸೃಷ್ಟಿಸಿದ್ದಾರೆ. ಅಲ್ಲದೇ ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿಯೇ ಉಳಿದುಕೊಂಡಿದ್ದಾರೆ. ಸಚಿವರ ಈ ಗೈರು ಹಾಜರಿಗೆ ನಿಗಮ ಮಂಡಳಿಗಳ ನೇಮಕ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಂಬಿ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುತ್ತಿಲ್ಲ ಎಂಬುದೇ ಅಂಬರೀಶ್ ಅವರ ಅಸಮಧಾನಕ್ಕೆ ಕಾರಣ ಎನ್ನಲಾಗುತ್ತಿದೆ.