ಅಂಬರೀಶ್ ಅಭಿಮಾನಿಗಳ ಆಕ್ರೋಶ

ಮಂಗಳವಾರ, 5 ಫೆಬ್ರವರಿ 2019 (16:57 IST)
ಸುಮಲತಾ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ಅಂಬಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.

JDS MLC ಕೆ.ಟಿ.ಶ್ರೀಕಂಠೇಗೌಡ ನೀಡಿರುವ ಹೇಳಿಕೆ ವಿವಾದಾತ್ಮಕ ಸ್ವರೂಪ ಪಡೆದುಕೊಂಡಿದೆ. ಶ್ರೀಕಂಠೇಗೌಡರ ವಿರುದ್ಧ ಅಂಬಿ ಅಭಿಮಾನಿಗಳ ಆಕ್ರೋಶ ಮುಂದುವರಿದಿದೆ.

ಸುಮಲತಾ ಮಂಡ್ಯ ಗೌಡ್ತಿ ಅಲ್ಲ ಎಂಬ ಹೇಳಿಕೆಗೆ ಕೆರಳಿರುವ ಅಂಬಿ ಅಭಿಮಾನಿಗಳು, ಇಂದು ಕೆ.ಟಿ.ಶ್ರೀಕಂಠೇಗೌಡರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಹೀಗಾಗಿ ಮಂಡ್ಯದ ಸುಭಾಶ್ ನಗರದಲ್ಲಿರುವ ಕೆ.ಟಿ.ಶ್ರೀಕಂಠೇಗೌಡ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಕೆಟಿಎಸ್ ವಿರುದ್ಧ ಆಕ್ರೋಶ ಮುಂದುವರಿಯುತ್ತಿದೆ. ಹೆಣ್ಣಿನ ಬಗ್ಗೆ ಗೌರವಿಲ್ಲದ ಕೆ.ಟಿ.ಶ್ರೀಕಂಠೇಗೌಡರಿಗೆ ಧಿಕ್ಕಾರ ಎಂದು ಪೋಸ್ಟ್ ಹರಿಬಿಡಲಾಗುತ್ತಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ