ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ನಮ್ಮ ಹಿರಿಯಣ್ಣ, ಅರನ್ನು ಬಿಟ್ಟು ಮಂಡ್ಯದಲ್ಲಿ ನಾವು ರಾಜಕಾರಣ ಮಾಡಲು ಸಾಧ್ಯವೆ? ನಾನು ಪಕ್ಕದ ಜಿಲ್ಲೆಯವನು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿದ್ದಾರೆ. ಇದು ತಾತ್ಕಾಲಿಕವಷ್ಟೇ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ಹೇಳಿದ್ದಾರೆ.