ನಟ ಯಶ್ ಮಾತನಾಡಿ ಅಂಬರೀಶ್ ಯಾವತ್ತೂ ತಮ್ಮ ಜೀವನದಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದ ಕೊಟ್ಟವರಲ್ಲ. ಮಂಡ್ಯ ಜಿಲ್ಲೆಯ ಜನತೆಯ ಜೊತೆಗೆ ರಾಜ್ಯದ ಜನತೆಗೆ ಅತ್ಯುತ್ತಮ ಕೊಡುಗೆ ನೀಡಿದ್ದಾರೆ. ಆದಾಗ್ಯೂ , ಅವರನ್ನು ಸಚಿವ ಸಂಪುಟದಿಂದ ಕೈಬಿಡಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಅಂಬರೀಶ್ ಬೆಂಬಲಿಗ ಆಪ್ತ ಲಿಂಗರಾಜು ಮಾತನಾಡಿ, ಸಚಿವ ಅಂಬರೀಶ್ ಮರಳುಗಣಿಗಾರಿಕೆ ಮಾಡಿದ್ದಾರಾ ? ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿದ್ದಾರಾ? ಯಾವ ಕಾರಣಕ್ಕೆ ಸಚಿವ ಸ್ಥಾನದಿಂದ ಕೈಬಿಡಲಾಗಿದೆ ಎನ್ನುವುದನ್ನು ಸಿಎಂ ಸಿದ್ದರಾಮಯ್ಯ ಉತ್ತರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.