ಅಂಬರೀಶ್ ಅಭಿಮಾನಿಯಿಂದ ಆತ್ಮಹತ್ಯೆಗೆ ಯತ್ನ

ಭಾನುವಾರ, 19 ಜೂನ್ 2016 (15:19 IST)
ಸಚಿವ ಸಂಪುಟದಿಂದ ಅಂಬರೀಶ್‌‍ರನ್ನು ಕೈಬಿಟ್ಟಿರುವುದನ್ನು ವಿರೋಧಿಸಿ ಇಂದು ನಡೆದ ಪ್ರತಿಭಟನೆಯಲ್ಲಿ ಅಂಬರೀಶ್ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
 
ಅಂಬರೀಶ್‌ಗೆ ಸಚಿವ ಸ್ಥಾನದಿಂದ ಕೊಕ್ ನೀಡಿರುವುದನ್ನು ವಿರೋಧಿಸಿ ನೂರಾರು ಅಭಿಮಾನಿಗಳು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆಸಿದ ಸಂದರ್ಭದಲ್ಲಿ ದ್ಯಾವಪ್ಪ ಎನ್ನುವ ಅಭಿಮಾನಿಯೊಬ್ಬ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
 
ಆದರೆ, ಸ್ಥಳದಲ್ಲಿಯೇ ಇದ್ದ ಪೊಲೀಸರು ದ್ಯಾವಪ್ಪನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ಅಲ್ಪ ಸ್ವಲ್ಪ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ವಸತಿ ಖಾತೆ ಸಚಿವ ಅಂಬರೀಶ್ ಅವರಿಗೆ ಸಚಿವ ಸ್ಥಾನದಿಂದ ಕೈಬಿಟ್ಟಿರುವುದನ್ನು ವಿರೋಧಿಸಿ ನಾಳೆ ಚಿತ್ರೋದ್ಯಮ ಬಂದ್ ಮಾಡಲು ಚಿತ್ರೋದ್ಯಮ ವಾಣಿಜ್ಯ ಮಂಡಳಿ ನಿರ್ಧರಿಸಿದೆ.
 
ಸಚಿವ ಅಂಬರೀಶ್ ಅವರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲ. ಯಾವುದೇ ಭ್ರಷ್ಟಾಚಾರ ಹಗರಣದಲ್ಲಿ ಭಾಗಿಯಾಗಿಲ್ಲವಾದರೂ ಅವರನ್ನು ಅನಗತ್ಯವಾಗಿ ಸಚಿವ ಸ್ಥಾನದಿಂದ ಹೊರಹಾಕಲಾಗಿದೆ ಎಂದು ಚಲನಚಿತ್ರ ನಟರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ