ಕೊರೊನಾ ಭೀತಿ ನಡುವೆ ಜಿಲ್ಲಾ ಉಸ್ತುವಾರಿಯ ನೇಮಕ

ಶುಕ್ರವಾರ, 10 ಏಪ್ರಿಲ್ 2020 (09:24 IST)
ಬೆಂಗಳೂರು : ಕೊರೊನಾ ಭೀತಿಯಿಂದ ತತ್ತರಿಸಿದ ರಾಜ್ಯದಲ್ಲಿ ಕೊರೊನಾ ವೈರಸ್ ನ್ನು ನಿಯಂತ್ರಿಸಲು ಹೊಸದಾಗಿ ಜಿಲ್ಲಾ ಉಸ್ತುವಾರಿಯನ್ನು ನೇಮಕ ಮಾಡಿದ್ದಾರೆ.


ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಅಲ್ಲದೇ ಸಚಿವ ಜಗದೀಶ್ ಶೆಟ್ಟರ್ , ಬಸವರಾಜ ಬೊಮ್ಮಾಯಿ, ಜೆಸಿ ಮಾಧುಸ್ವಾಮಿ ಮತ್ತು ಪ್ರಭು ಚವ್ಹಾಣ ಅವರಿಗೆ ಹೆಚ್ಚುವರಿ ಜಿಲ್ಲೆಗಳ ಉಸ್ತುವಾರಿ ನೀಡಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ ಉಸ್ತುವಾರಿ ನೀಡದೆ ಕೈ ಬಿಟ್ಟಿರುವುದು ಚರ್ಚೆಗೆ ಕಾರಣವಾಗಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ