ಕುಲಗೆಟ್ಟ ಸರಕಾರ ಬದಲಿಸಲು ಪರಿವರ್ತನಾ ಯಾತ್ರೆ: ಅಮಿತ್ ಶಾ

ಗುರುವಾರ, 2 ನವೆಂಬರ್ 2017 (16:05 IST)
ಕುಲಗೆಟ್ಟ ಸರಕಾರ ಬದಲಿಸಲು ಬಿಜೆಪಿ ಪರಿವರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ಕೇಂದ್ರ ಸರಕಾರ 1 ಲಕ್ಷ 30 ಸಾವಿರ ಕೋಟಿ ರೂಪಾಯಿಗಳ ಅನುದಾನ ನೀಡಿದೆ. ಆದರೆ, ಕೇಂದ್ರದಿಂದ ಬಿಡುಗಡೆಯಾದ ಹಣ ಜನರಿಗೆ ತಲುಪುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
 
ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಕಾಂಗ್ರೆಸ್ ಪಕ್ಷ ಲೂಟಿ ಹೊಡೆಯುವುದರಲ್ಲಿ ನಿರತವಾಗಿದೆ.ಪರಿವರ್ತನಾ ಯಾತ್ರೆಯಿಂದ ಸರಕಾರ ಬದಲಿಸಲು ಸಾಧ್ಯವಿಲ್ಲ. ಆದರೆ, ಭ್ರಷ್ಟ ಸರಕಾರವನ್ನು ಕಿತ್ತೊಗೆದು ಪಾರದರ್ಶಕ ಸರಕಾರವನ್ನು ತರಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ವ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಬಿಜೆಪಿಯೊಂದಿಗೆ ಕೈಜೋಡಿಸಿ ರಾಜ್ಯದ ಅಭಿವೃದ್ಧಿಗೆ ಸಹಕರಿಸಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ