ದೇಶವನ್ನು ಬಿಜೆಪಿ ಆಳುತ್ತಿರುವುದು ದುರದೃಷ್ಟಕರ ಸಂಗತಿ: ರಾಮಲಿಂಗಾರೆಡ್ಡಿ

ಗುರುವಾರ, 10 ಆಗಸ್ಟ್ 2017 (17:46 IST)
ರಾಜ್ಯ ಬಿಜೆಪಿ ನಾಯಕರ ಜಗಳ ಬಿಡಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬರ್ತಿದ್ದಾರೆ ಎಂದು ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ಲೇವಡಿ ಮಾಡಿದ್ದಾರೆ.
 
ರಾಜ್ಯದ ಸಮಸ್ಯೆಗಳಿಗೆ ಬಿಜೆಪಿ ಸಂಸದರು ಸ್ಪಂದಿಸಿಲ್ಲ. ಬಿಜೆಪಿಗೆ ಜನತೆಯ ಬಗ್ಗೆ ಕಾಳಜಿಯಿಲ್ಲವಾದ್ದರಿಂದ ಜನರ ಮತ ಕೇಳುವ ನೈತಿಕತೆಯಿಲ್ಲ. ದೇಶವನ್ನು ಬಿಜೆಪಿ ಆಳುತ್ತಿರುವುದು ದುರದೃಷ್ಟಕರ ಸಂಗತಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕಾಂಗ್ರೆಸ್‌ನ ಯಾವೊಬ್ಬ ಶಾಸಕನು ಜೈಲಿಗೆ ಹೋಗಿಲ್ಲ. ಕಾಂಗ್ರೆಸ್‌ನ ಯಾವೊಬ್ಬ ಶಾಸಕನು ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿಗೆ ರಾಜ್ಯದಲ್ಲಿ ಅಸ್ತಿತ್ವವೇ ಇಲ್ಲ ಎಂದು ವ್ಯಂಗ್ಯವಾಡಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನಪರ ಸರಕಾರವಾಗಿದ್ದು, ಮುಂದಿನ ಬಾರಿಯೂ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ