ಮಹಾನಗರ ಬೂತ್ ವಿಜಯ ಸಂಕಲ್ಪ ಸಮಾವೇಶಕ್ಕೆ ಅಮಿತ್ ಶಾ ಚಾಲನೆ

ಶನಿವಾರ, 31 ಡಿಸೆಂಬರ್ 2022 (19:14 IST)
ನಗರದ ಅರಮನೆ ಮೈದಾನದಲ್ಲಿ ಬೆಂಗಳೂರು ಮಹಾನಗರ ಬೂತ್ ವಿಜಯ ಸಂಕಲ್ಪ ಸಮಾವೇಶಕ್ಕೆ ಅಮಿತ್ ಶಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಜೆಡಿಎಸ್ ಕಾಂಗ್ರೆಸ್ ಚುನಾವಣೆ ಹತ್ತಿರ ಬರುತ್ತಾ ಇದ್ದಂತೆ ಒಟ್ಟಿಗೆ ಕೂರುತ್ತಾರೆ. ಅವರ ಆಡಳಿತ ನೋಡಿದ್ದೀರಿ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಯಶಸ್ವಿ ಆಗಿ ಸರ್ಕಾರ ನಡೆಸಿದ್ದಾರೆ. ದಕ್ಷಿಣದಲ್ಲಿ ಬಿಜೆಪಿಯನ್ನು ಬಲಿಷ್ಠ ಮಾಡಬೇಕಿದೆ. ದಕ್ಷಿಣ ಭಾರತಕ್ಕೆ ಕರ್ನಾಟಕ ಹೆಬ್ಬಾಗಿಲು. ಕರ್ನಾಟಕದ ಮೂಲಕ ದಕ್ಷಿಣ ಭಾರತಕ್ಕೆ ಬಿಜೆಪಿ ಪ್ರವೇಶಿಸುತ್ತಿದೆ ಎಂದು ಹೇಳಿದರು. ಐದು ರಾಜ್ಯಗಳಲ್ಲಿ ಬಿಜೆಪಿಗೆ ಪೂರ್ಣ ಬಹುಮತ : ಮಂಡ್ಯದಲ್ಲಿ ಈ ರೀತಿ ರ್ಯಾಲಿ ನಾನು ನೋಡಿರಲಿಲ್ಲ. ದಕ್ಷಿಣದಲ್ಲಿ, ಮಂಡ್ಯ, ಮೈಸೂರು ಭಾಗದಲ್ಲಿ ನಿನ್ನೆ ನಡೆದ ರ್ಯಾಲಿ ಅದ್ಭುತವಾಗಿ ಇತ್ತು. ಇದಕ್ಕಾಗಿ ನಾನು ಕಟೀಲ್ ರನ್ನು ಅಭಿನಂದಿಸುತ್ತೇನೆ. ಐದು ರಾಜ್ಯಗಳಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದಿದೆ. ಗುಜರಾತ್ ನಲ್ಲಿ ಮೋದಿ ಎಲ್ಲಾ ದಾಖಲೆ ಪುಡಿ ಮಾಡಿದ್ದಾರೆ. ಕಾಂಗ್ರೆಸ್ ಗೆ ವಿಪಕ್ಷ ಸ್ಥಾನ ಕೂಡ ಸಿಗಲಿಲ್ಲ ಎಂದು ಕಾಂಗ್ರೆಸ್‌ನ್ನು ಅಪಹಾಸ್ಯ ಮಾಡಿದರು. ಇನ್ನು ಗುಜರಾತ್, ಉತ್ತರಾಖಂಡ್, ಮಣಿಪುರ್, ಗೋವಾದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಪಡೆದಿದೆ. ಅಲ್ಲೆಲ್ಲಾ ಕಾಂಗ್ರೆಸ್ ಹೀನಾಯವಾಗಿ ಸೋತಿದೆ ಎಂದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ