ಗುಜರಾತ್ ನಲ್ಲಿ ಬಿಎಸ್ ವೈಗೆ ಅಮಿತ್ ಶಾ ನೀಡಿದ ಸೂಚನೆ ಏನು?
ಬಿಎಸ್ ವೈ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಅಮಿತ್ ಶಾಗೆ ಮಾಹಿತಿ ನೀಡಿದ್ದರು. ಈ ಸಂದರ್ಭದಲ್ಲಿ ಪಕ್ಷದ ಗುಪ್ತ ತಂಡ ಎಲ್ಲವನ್ನೂ ಗಮನಿಸುತ್ತಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದನ್ನು ನಾವೇ ನಿಮಗೆ ಹೇಳುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ.
ರಾಜ್ಯದ ಸಮ್ಮಿಶ್ರ ಸರ್ಕಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಅದು ತಾನಾಗಿಯೇ ಬಿದ್ದು ಹೋಗುತ್ತದೆ. ಸದ್ಯಕ್ಕೆ ಲೋಕಸಭೆ ಚುನಾವಣೆ ಬಗ್ಗೆ ಗಮನಹರಿಸಿ. ಪ್ರಧಾನಿ ಮೋದಿ ಮತ್ತೆ ಪ್ರಧಾನಿಯಾಗಬೇಕು. ಅದಕ್ಕೆ ಬೇಕಾದ ಸಿದ್ಧತೆ ಮಾಡಿ ಎಂದು ಯಡಿಯೂರಪ್ಪಗೆ ಶಾ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.