ಅಮಿತ್ ಶಾ ಹಿಂದೂನಾ, ಅಹಿಂದೂನಾ: ಸ್ಪಷ್ಟನೆ ನೀಡಲಿ ಎಂದ ಸಿಎಂ

ಗುರುವಾರ, 29 ಮಾರ್ಚ್ 2018 (13:52 IST)
ಅಮಿತ್ ಶಾ ನನ್ನನ್ನು ಅಹಿಂದು ಎಂದು ಹೇಳ್ತಾರೆ.‌ ಅಮಿತ್ ಶಾ ಜೈನ ಧರ್ಮದವರು. ಅವರು ಹಿಂದೂನಾ ಅಥವಾ ಅಹಿಂದುನಾ ಅಂತ ಮೊದಲು ಸ್ಪಷ್ಟಪಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಅಮಿತ್ ಶಾ ಮಠಕ್ಕಾದರೂ ಹೋಗಲಿ, ಎಲ್ಲಿಗೆ ಬೇಕಾದರೂ ಹೋಗಲಿ ಅವರ ವೈಯಕ್ತಿಕ ಸ್ವಾತಂತ್ರ್ಯಆ ಬಗ್ಗೆ ನಾನೂ ಏನನ್ನು ಹೇಳುವುದಿಲ್ಲ. ಆದ್ರೆ ನಾನು 
ಹೋದಲೆಲ್ಲ ಅಮಿತ್ ಶಾ ಹಿಂಬಾಲಿಸುತ್ತಿದ್ದಾರೆ. ನನ್ನ ಕಂಡರೆ ಅಮಿತ್ ‌ಶಾಗೆ ಭಯವಾಗಿರಬಹುದು ಎಂದು ಲೇವಡಿ ಮಾಡಿದರು.
 
ಬೈ ಎಲೆಕ್ಷನ್ ನಲ್ಲಿ ಯಡಿಯೂರಪ್ಪ ಸೇರಿ ಎಲ್ಲರೂ ಬಂದಿದ್ರು. ಉಪಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಅಂದಿದ್ರು. ಆದರೆ ಗೆದ್ದಿದ್ದು ಯಾರು ಎಂದು ಇಡೀ ರಾಜ್ಯದ ಜನರಿಗೆ ಗೊತ್ತಿದೆ
 
ಯಡಿಯೂರಪ್ಪ ತಮ್ಮನ್ನು ಭ್ರಷ್ಟ ಎಂದು ಕರೆದಿರುವುದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಜೈಲಿಗೆ ಹೋಗಿ ಬಂದವರೆಲ್ಲ ನನಗೆ ಪಾಠ ಹೇಳಿ ಕೊಡ್ತಾರಾ.? ಎಂದು ಟಾಂಗ್ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ